ಈ ಆಟವನ್ನು ಆಧುನಿಕ ಕ್ರಿಕೆಟ್ಕ್ಕೆ ಹೋಲಿಸಬಹುದು. ಚೆಂಡಿನ(ball) ಬದಲಾಗಿ ಮರದಿಂದ ಮಾಡಲಾದ ಚಿಕ್ಕ ಚಿನ್ನಿ ಹಾಗೂ ಬ್ಯಾಟ್(bat)ಗೆ ಬದಲಾಗಿ ಮರದಿಂದಲೇ ತಯಾರಾದ ಬಡಿಗೆಯ ರೂಪದ ದಾಂಡನ್ನು ಬಳಸಲಾಗುತ್ತದೆ. ಚಿನ್ನಿ ದಾಂಡು ಅಥವಾ ಗಿಲ್ಲಿ ದಾಂಡು ಅಥವಾ ಹಾಣೆ ಗೆಂಡೆ ಅಥವಾ ಚಿನ್ನಿ ಕೋಲು ಒಂದು ಜನಪ್ರಿಯ ಗ್ರಾಮೀಣ ಆಟ. ಇದರಲ್ಲಿ ಮರದ ಕೋಲಿನಿಂದ ಮಾಡಿದ ಒಂದು ಚಿಕ್ಕ ಚಿನ್ನಿ ಅಥವಾ ಗಿಲ್ಲಿ ಅಥವಾ ಹಾಣೆ ಮತ್ತು ಸ್ವಲ್ಪ ದೊಡ್ಡದಾದ ಒಂದು ದಾಂಡು ಅಥವಾ ಕೋಲು ಇವುಗಳ ಸಹಾಯದಿಂದ ಆಡಲಾಗುತ್ತದೆ .
ಇದನ್ನು ವೈಯಕ್ತಿಕವಾಗಿ ಅಥವಾ ತಂಡಗಳಾಗಿ ಆಡಬಹುದು. ವ್ಯವಸ್ಥೆ/ಸಲಕರಣೆಗಳು ಆಡಲು ಸಾಕಷ್ಟು ಜಾಗ. ಸುಮಾರು ಒಂದು ಗೇಣು ಉದ್ದದ ನೆಲದ ಮೇಲೆ ಕೊರೆದ ಒಂದು ಗುಂಡಿ / ಕುಳಿ / ಉಳ್ಳ. ಗುಂಡಿಯಷ್ಟೇ ಉದ್ದವಾದ ಮರದ ಕೋಲಿನಿಂದ ಮಾಡಿದ ಚಿನ್ನಿ / ಹಾಣೆ / ಗಿಲ್ಲಿ. ಇದರ ಎರಡೂ ಬದಿ ಚೂಪಾಗಿರಬೇಕು. ಚಿನ್ನಿಗಿಂತ ಕನಿಷ್ಠ ಎರಡೂವರೆ-ಮೂರು ಪಟ್ಟು ಉದ್ದವಾದ, ಮರದ ಕೋಲಿನಿಂದ ಮಾಡಿದ ನೇರವಾದ ದಾಂಡು.
ಆಟದ ನಿಯಮಗಳು ಸಂಪಾದಿಸಿ
ಆಟಗಾರನು ಗುಂಡಿಯ ಮೇಲೆ ಅಡ್ಡವಾಗಿ ಚಿನ್ನಿಯನ್ನು ಇಡಬೇಕು. ಎದುರು ತಂಡದ ಆಟಗಾರರು ಸನ್ನದ್ಧರಾಗಿರುವುದನ್ನು ತಿಳಿಯಲು ಹೋ ಎಂದು ಕೂಗುವ ರೂಢಿಯಿದೆ. ಎದುರು ತಂಡದವರು ಹೋ ಎಂದು ಉತ್ತರಿಸಿದ ಮೇಲೆ ಚಿನ್ನಿಯ ಕೆಳಭಾಗದಲ್ಲಿ ದಾಂಡನ್ನಿಟ್ಟು ಚಿನ್ನಿಯನ್ನು ಆದಷ್ಟು ದೂರ ಚಿಮ್ಮಬೇಕು. ನೆಲಕ್ಕೆ ಬೀಳುವ ಮೊದಲು ಅದನ್ನು ಎದುರು ತಂಡದ ಆಟಗಾರರು ಹಿಡಿಯಬಹುದು.
ಹೀಗೆ ಹಿಡಿದರೆ ಆಟಗಾರ ತನ್ನ ಪಾಳಿ ಕಳೆದುಕೊಂಡಂತೆ. ಎದುರು ತಂಡದವರಿಗೆ ಅದನ್ನು ಹಿಡಿಯಲಾಗದಿದ್ದರೆ ದಾಂಡನ್ನು ಗುಂಡಿಯಿಂದ ಒಂದು ದಾಂಡಿನಷ್ಟು ದೂರ ಹಿಂದೆ ಇಡಬೇಕು. ಎದುರು ತಂಡದ ಯಾವುದಾದರೂ (ಅಥವಾ ಚಿನ್ನಿ ಬಿದ್ದ ಸ್ಥಳಕ್ಕೆ ಹತ್ತಿರವಿದ್ದ) ಆಟಗಾರ ಅದಕ್ಕೆ ಚಿನ್ನಿ ಬಿದ್ದ ಸ್ಥಳದಿಂದ ಹೊಡೆಯಬೇಕು. ಚಿನ್ನಿ ದಾಂಡಿಗೆ ಮುಟ್ಟಿದರೆ ಆಟಗಾರ ತನ್ನ ಪಾಳಿಯನ್ನು ಕಳೆದುಕೊಂಡಂತೆ. ಚಿನ್ನಿ ಗುಂಡಿಯ ಒಳಗೆ ಬಿದ್ದರೆ ಕೂಡ ಆಟಗಾರ ತನ್ನ ಪಾಳಿಯನ್ನು ಕಳೆದುಕೊಂಡಂತೆ.
ಚಿನ್ನಿ ಗುಂಡಿಯಿಂದ ಒಂದು ಚಿನ್ನಿಯಷ್ಟು ದೂರದಲ್ಲಿ ಬಿದ್ದರೆ ಆಟಗಾರ ಎಡಗೈಯಲ್ಲಿ ಆಟ ಮುಂದುವರೆಸಬೇಕು. ಆಟಗಾರನು ಚಿನ್ನಿಯನ್ನು ದಾಂಡಿನಿಂದ ಮೇಲಕ್ಕೆ ಚಿಮ್ಮಿಸಿ ಚಿನ್ನಿ ಗಾಳಿಯಲ್ಲಿರುವಾಗ ಅದಕ್ಕೆ ಹೊಡೆಯಬೇಕು. ಗಾಳಿಯಲ್ಲಿರುವಾಗ ಎಷ್ಟು ಸಲ ಬೇಕಾದರೂ ಹೊಡೆಯಬಹುದು. ಹೀಗೆ ಮೇಲೆ ಚಿಮ್ಮಿಸಿದಾಗ ಎದುರು ತಂಡದ ಆಟಗಾರರು ಚಿನ್ನಿಯನ್ನು ಹಿಡಿದರೆ ಆಟಗಾರ ತನ್ನ ಪಾಳಿ ಕಳೆದುಕೊಂಡಂತೆ. ಮೂರು ಬಾರಿ ಚಿನ್ನಿಯನ್ನು ಹೀಗೆ ಹೊಡೆಯಲಾಗದಿದ್ದರೆ ಆಟಗಾರ ಪಾಳಿ ಕಳೆದುಕೊಂಡಂತೆ.
ಚಿನ್ನಿಯನ್ನು ಎರಡಕ್ಕಿಂತ ಹೆಚ್ಚು ಬಾರಿ ಹೊಡೆದರೆ ಗಿಲ್ಲಿ ಎಂದು ಕರೆಯಲಾಗುತ್ತದೆ. (ಎರಡು ಬಾರಿ ಹೊಡೆದರೆ ಒಂದು ಗಿಲ್ಲಿ, ಮೂರು ಬಾರಿ ಹೊಡೆದರೆ ಎರಡು ಗಿಲ್ಲಿ.. ಹೀಗೆ. ಸ್ಥಳದಿಂದ ಸ್ಥಳಕ್ಕೆ ಈ ನಿಯಮ ಬದಲಾಗಬಹುದು) ಚಿನ್ನಿ ಬಿದ್ದ ಸ್ಥಳದಿಂದ ಗುಂಡಿಯವರೆಗಿನ ದೂರವನ್ನು ಆಟಗಾರ ಊಹಿಸಬೇಕು. ಗಿಲ್ಲಿ ಆಗಿದ್ದರೆ ಚಿನ್ನಿಯಿಂದ ಅಳೆಯಬೇಕು. ಎಷ್ಟು ಬಾರಿ ಗಿಲ್ಲಿಯಾಗಿದೆ ಯೋ ಅಷ್ಟರಿಂದ ಅಂಕಗಳನ್ನು ಗುಣಿಸಬೇಕು.
ಗಿಲ್ಲಿ ಆಗಿಲ್ಲದಿದ್ದರೆ ದಾಂಡಿನಿಂದ ಅಳೆಯಬೇಕು. ಊಹಿಸಿದ್ದಕ್ಕಿಂತ ಕಡಿಮೆ ದೂರವಿದ್ದರೆ ಆಟಗಾರ ಪಾಳಿ ಕಳೆದುಕೊಂಡಂತೆ. ಸರಿಯಾಗಿ ಊಹಿಸಿದರೆ ಆಟಗಾರ ಅಥವಾ ಅವನ ತಂಡಕ್ಕೆ ಅಷ್ಟು ಅಂಕಗಳು ದೊರೆತಂತೆ. ಮೊದಲೇ ನಿರ್ಧರಿಸಿದ ಅಂಕವನ್ನು ತಲುಪುವವರೆಗೆ, ಅಥವಾ ಯಾರು/ಯಾವ ತಂಡ ಹೆಚ್ಚು ಅಂಕ ಗಳಿಸಿರುತ್ತದೆಯೋ ಆ ಆಟಗಾರ / ತಂಡ ಗೆದ್ದಂತೆ.
ಪ್ರಿಯ ಸ್ನೇಹಿತರೇ ಮನಸು ಇದು ಚಿತ್ತಾ ಆರ್ಟ್ ಸ್ಟುಡಿಯೋ ಸಂಸ್ಥೆಯ ಜಿನೇಂದ್ರ ರವರು ನಡೆಸುತ್ತಿರುವ ಈ ಬ್ಲಾಗ್ ಪತ್ರಿಕೆ
ಚಿನ್ನಿದಾಂಡು
Subscribe to:
Post Comments (Atom)
ಸಾಗರದಾಚೆ ಜಿನಧರ್ಮ ಪ್ರಭಾವನೆ : ಡಿ. 3-4 ದುಬೈ ನಲ್ಲಿ ಜಿನ ಸಮ್ಮಿಲನ
▫️ವಿಶ್ವಕ್ಕೆ ಶಾಂತಿ ಅಹಿಂಸೆ ಸಂದೇಶ ಸಾರಿದ ಜೈನ ಧರ್ಮ ಪ್ರಾಚೀನ ವಿಶ್ವ ಧರ್ಮ ಎನ್ನುವದು ಅಷ್ಟೇ ಸತ್ಯ. ಸಂಖ್ಯಾ ದೃಷ್ಟಿಯಿಂದ ಜೈನರು ತುಂಬಾ ಕಡಿಮೆಯಿರಬಹುದು ಆದರೆ ...
-
ಶಿವಪ್ಪ ನಾಯಕ ಶಿವಮೊಗ್ಗವನ್ನು ಆಳಿದ ಪ್ರಮುಖ ದೊರೆ ಈತ ಭಾರತದಲ್ಲಿ ಭೂಮಿಯ ಅಳತೆಗೆ ಮಾಪನವನ್ನು ಕಂಡುಕೊಂಡ ಮೊದಲ ದೊರೆ ಅಲ್ಲದೆ ಶಿಸ್ತಿಗೆ ಹೆಸರಾಗಿ ಶಿಸ್ತುಗಾರ ಶಿವಪ್ಪ...
-
ಚಿತ್ರ ಮತ್ತು ಶಿಲ್ಪಕಲಾವಿದರಾದ ಶ್ರೀ ಎಂ.ಎಂ.ಜಿನೇಂದ್ರ ಜೈನ್ - ಬೆಂಗಳೂರು ಇವರ ಪರಿಚಯ ಮಲೆನಾಡು ಪ್ರಾಂತ್ಯದ ಸಾಗರ ತಾಲ್ಲೂಕಿನ ಮಳ್ಳೋಡಿ ಗ್ರಾಮದ ಶ್ರೀ.ಮೇಘ...
-
ಸ್ನೇಹಿತರೇ,. ಪ್ರಕೃತಿ ಚಿತ್ರ.ಸಮಕಾಲೀನ ಕಲಾಕೃತಿ ರೇಖಾಚಿತ್ರ. ಶಿಲ್ಪ ಕಲಾಕೃತಿ. ಮ್ಯೂರಲ್ ಗಳು. ಸೆಟ್ ವರ್ಕಗಳು ಕಲಾಕ್ಷೇತ್ರದ ಎಲ್ಲಾ ಆಯಮಗಳಲ್ಲೂ...
-
ಮಹಾವೀರರು ಅನೇಕ ಪರಿಣಾಮಕಾರಿ ತತ್ವಗಳನ್ನು ಜಗತ್ತಿಗೆ ನೀಡಿದ್ದಾರೆ. ಅದರಲ್ಲೂ ಮಹಾವೀರರು ಹೇಳಿದ ಮಾನವೀಯ ಸಂದೇಶಗಳು ಕೇವಲ ಜೈನ ಮತಾವಲ0ಭಿಗಳಿಗೆ ಮಾತ್ರವಲ್ಲ...
-
ರಾಣಿ - ಅಬ್ಬಕ್ಕ (1522-1570) ಪೋರ್ಚುಗೀಸ್ ವಿರುದ್ಧ ಹೋರಾಡಿದರು (ದುರದೃಷ್ಟವಶಾತ್ ಇದು ಭಾರತದಲ್ಲಿ ಮರೆತುಹೋದ ಇತಿಹಾಸ). ಅವಳು ಪ್ರಸಿದ್ಧವಾದ ಅಭಯಾ ರಾಣಿ ಅಬ್ಬಕ್ಕ ...
No comments:
Post a Comment